---Advertisement---

ಚಿಂಚೋಳಿ ತಾಲೂಕಿನ ಗ್ರಾಮಗಳಿಗೆ ಸಂಸದ ಸಾಗರ ಖಂಡ್ರೆ ಭೇಟಿ

On: September 2, 2025 10:26 AM
Follow Us:
ಚಿಂಚೋಳಿ ತಾಲೂಕಿನ ಗ್ರಾಮಗಳಿಗೆ ಸಂಸದ ಸಾಗರ ಖಂಡ್ರೆ ಭೇಟಿ
---Advertisement---

ಭಾರೀ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಪರಿಶೀಲನೆ – ರೈತರಿಗೆ ತುರ್ತು ನೆರವು ಭರವಸೆ

ಚಿಂಚೋಳಿ: 02/09/2025 ಬೀದರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿಂಚೋಳಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ರೈತರು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವೆಡೆ ಹೊಲಗಳಲ್ಲಿ ನೀರು ನಿಂತು ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ರೈತರಲ್ಲಿ ಆತಂಕ ಹೆಚ್ಚಿಸಿದೆ.

ಈ ಹಿನ್ನೆಲೆಯಲ್ಲಿ, ಇಂದು ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಸುಭಾಷ್ ರಾಥೋಡ್ ಹಾಗೂ ಸ್ಥಳೀಯ ಮುಖಂಡರೊಂದಿಗೆ ನಾಗ್ ಇದಲಾಯಿ, ಪೋಲಕಪಳ್ಳಿ ತಾಂಡಾ, ಚಂದಾಪುರನ್ ಪಟೇಲ್ ಕಾಲೋನಿ ಹಾಗೂ ಕೊಲ್ಲೂರ್ ಗ್ರಾಮಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು.

ಗ್ರಾಮಗಳ ಪ್ರವಾಸದ ವೇಳೆ ಸಂಸದರು ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಅವರ ಅಳಲುಗಳನ್ನು ಆಲಿಸಿದರು. ಅವರು ಬೆಳೆದಿದ್ದ ಜೋಳ, ಸೊಯಾಬಿನ್ ಹಾಗೂ ಇತರ ಖರೀಫ್ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿರುವುದು ಗಮನಿಸಿದರು. ಮಳೆಯಿಂದ ಉಂಟಾದ ಆರ್ಥಿಕ ಸಂಕಷ್ಟ, ಪಶು ಆಹಾರದ ತೊಂದರೆ ಮತ್ತು ಹೊಲಗಳಲ್ಲಿ ನಿಂತಿರುವ ನೀರಿನ ಸಮಸ್ಯೆಗಳನ್ನು ಗ್ರಾಮಸ್ಥರು ಸಂಸದರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಸಾಗರ ಖಂಡ್ರೆ ಅವರು, “ಈ ಪರಿಸ್ಥಿತಿಯನ್ನು ನಾನು ಸರ್ಕಾರದ ಗಮನಕ್ಕೆ ತಂದು, ತುರ್ತು ಪರಿಹಾರ ಒದಗಿಸಲು ಮತ್ತು ಪರಿಹಾರಧನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುತ್ತೇನೆ. ರೈತರಿಗೆ ತಕ್ಷಣ ಸಹಾಯ ದೊರೆಯುವಂತೆ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು,” ಎಂದು ಭರವಸೆ ನೀಡಿದರು.

ಸಂಸದ ಸಾಗರ ಖಂಡ್ರೆ

ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯತ್ ಸದಸ್ಯರು, ಕೃಷಿ ಅಧಿಕಾರಿಗಳು ಹಾಗೂ ಅನೇಕ ಗ್ರಾಮಸ್ಥರು ಹಾಜರಿದ್ದರು.

Join WhatsApp

Join Now

RELATED POSTS

Leave a Comment