“ನಮ್ಮ ಏರಿಯಾ ಮಿನಿ ಪಾಕಿಸ್ತಾನದಂತೆ ಆಗಿದೆ. ಮಸೀದಿ ಮುಂಭಾಗ ನಮ್ಮನ್ನು ಓಡಾಡಲು ಬಿಡುವುದಿಲ್ಲ. ಮಚ್ಚು ಲಾಂಗು ಹಿಡಿದು ರಾತ್ರಿ ವೇಳೆ ಯುವಕರು ಓಡಾಡುತ್ತಾರೆ. ನಾವು ಭಯದ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನಮ್ಮವರು ಸತ್ತರೂ ಶವದ ಮುಂದೆ ತಮಟೆ ಬಾರಿಸಲು ಬಿಡುವುದಿಲ್ಲ” ಎಂದು ಚನ್ನೇಗೌಡ ಬಡಾವಣೆಯ ಹಿಂದೂ ಮಹಿಳೆಯರು ಪೊಲೀಸರ ಎದುರು ಅಳಲು ತೋಡಿಕೊಂಡರು.
ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಕಲ್ಲುತೂರಾಟ ಹಾಗೂ ಸೋಮವಾರದ ಪ್ರತಿಭಟನೆ, ಲಾಠಿ ಪ್ರಹಾರದಿಂದ ಮದ್ದೂರು ಪಟ್ಟಣದಲ್ಲಿ ಎರಡು ದಿನಗಳಿಂದ ಉದ್ವಿಗ್ನತೆ ಆವರಿಸಿತ್ತು. ಸೋಮವಾರ ಸಂಜೆ ಶಾಂತಿ ನೆಲೆಸಿದಂತೆ ಕಂಡರೂ, ಈಗಿನ ಸ್ಥಿತಿ ಒಳಗೆ ಹೊತ್ತಿ ಉರಿಯುತ್ತಿರುವ ಕೆಂಡದಂತಿದೆ.
“ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಘಟನೆ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಮದ್ದೂರು ಶಾಸಕ ಕೆ.ಎಂ.ಉದಯ ತಿಳಿಸಿದ್ದಾರೆ.
“ಯಾರೂ ಆತಂಕಕ್ಕೆ ಮತ್ತು ಉದ್ವೇಗಕ್ಕೆ ಒಳಗಾಗಬೇಡಿ. ನಮ್ಮ ತಾಲ್ಲೂಕಿನ ಜನತೆ ಶಾಂತಿ ಪ್ರಿಯರು. ಆಗಿರುವ ಘಟನೆಯನ್ನು ಸರಿಪಡಿಸಿಕೊಳ್ಳೋಣ. ತಪ್ಪಿತಸ್ಥರನ್ನು ಸದೆಬಡಿದು ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ನಿಮ್ಮ ಜೊತೆ ನಾವು ಯಾವಾಗಲೂ ಇರುತ್ತೇವೆ. ಎಲ್ಲರೂ ಶಾಂತಿ ಕಾಪಾಡುವಂತೆ ಕೈ ಮುಗಿದು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.







1 thought on “ಮಚ್ಚು ಲಾಂಗು ಹಿಡಿದು ರಾತ್ರಿ ವೇಳೆ ಯುವಕರು ಓಡಾಡುತ್ತಾರೆ ಪೊಲೀಸರ ಎದುರು ಮದ್ದೂರು ಜನತೆಯ ಅಳಲು”