---Advertisement---

ಪತಿಯನ್ನು ಹತ್ಯೆಗೈದು ದೇಹವನ್ನು ತುಂಡು ತುಂಡು ಮಾಡಿ ಗ್ರೈಂಡರ್‌ನಲ್ಲಿ ರುಬ್ಬಿ ಚರಂಡಿಗೆ ಎಸೆದ ಪತ್ನಿ–ಪ್ರಿಯಕರ ಬಂಧನ!!!

On: December 24, 2025 2:44 PM
Follow Us:
---Advertisement---

ಪತಿಯನ್ನು ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ತುಂಡು ತುಂಡು ಮಾಡಿ ವುಡ್‌ ಗ್ರೈಂಡರ್‌ನಲ್ಲಿ ರುಬ್ಬಿ ಚರಂಡಿಗೆ ಎಸೆದ ಆರೋಪದ ಹಿನ್ನೆಲೆಯಲ್ಲಿ, ಆತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ರೂಬಿ ಮತ್ತು ಗೌರವ್ ಎಂಬ ಆರೋಪಿಗಳನ್ನು ಡಿಸೆಂಬರ್ 20ರಂದು ವಶಕ್ಕೆ ಪಡೆದು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಕೆ. ಬಿಷ್ಣೋಯ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಚಂದೌಸಿ ಪ್ರದೇಶದ ಮೊಹಲ್ಲಾ ಚುನ್ನಿ ನಿವಾಸಿ ರೂಬಿ ನವೆಂಬರ್ 18ರಂದು ತನ್ನ ಪತಿ ರಾಹುಲ್ (38) ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ ಡಿಸೆಂಬರ್ 15ರಂದು ಈದ್ಗಾ ಪ್ರದೇಶದ ಸಮೀಪದ ಚರಂಡಿಯಿಂದ ತೀವ್ರವಾಗಿ ವಿರೂಪಗೊಂಡ ಶವವನ್ನು ಪೊಲೀಸರು ಪತ್ತೆಹಚ್ಚಿದ್ದರು.

ಪತ್ತೆಯಾದ ಶವದಲ್ಲಿ ತಲೆ, ಕೈಗಳು ಮತ್ತು ಕಾಲುಗಳು ಕಾಣೆಯಾಗಿದ್ದವು. ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವಿಧಿವಿಜ್ಞಾನ ತಂಡವು ವಿವರವಾದ ಪರಿಶೀಲನೆ ಮಾಡಿ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ತನಿಖೆಯ ವೇಳೆ ಮೃತದೇಹದ ಮೇಲೆ “ರಾಹುಲ್” ಎಂಬ ಹೆಸರು ಬರೆಯಲ್ಪಟ್ಟಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಸಮೀಪದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಾಣೆಯಾದವರ ವರದಿಗಳನ್ನು ಪರಿಶೀಲಿಸಿದಾಗ, ರಾಹುಲ್ ಅವರ ಮೊಬೈಲ್ ಫೋನ್ ನವೆಂಬರ್ 18ರಿಂದಲೇ ಸ್ವಿಚ್ ಆಫ್ ಆಗಿರುವುದು ತಾಂತ್ರಿಕ ವಿಶ್ಲೇಷಣೆಯಲ್ಲಿ ದೃಢಪಟ್ಟಿದೆ.

ಈ ಎಲ್ಲ ಅಂಶಗಳ ಆಧಾರದ ಮೇಲೆ ಪೊಲೀಸರು ರೂಬಿಯ ಪಾತ್ರವನ್ನು ಶಂಕಿಸಿದರು. ವಿಚಾರಣೆಯ ವೇಳೆ, ರೂಬಿ ಹಾಗೂ ಗೌರವ್ ನಡುವೆ ಅಕ್ರಮ ಸಂಬಂಧವಿದ್ದು, ಅದನ್ನು ರಾಹುಲ್ ರೆಡ್‌ಹ್ಯಾಂಡ್ ಆಗಿ ಕಂಡಿದ್ದಾನೆ. ಈ ಹಿನ್ನೆಲೆಯಲ್ಲೇ ರೂಬಿ ತನ್ನ ಪ್ರಿಯಕರ ಗೌರವ್‌ನ ಸಹಾಯದಿಂದ ರಾಹುಲ್‌ನನ್ನು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ರಾಹುಲ್ ಮೇಲೆ ಕಬ್ಬಿಣದ ರಾಡ್ ಮತ್ತು ಕಬ್ಬಿಣದ ಕುಟ್ಟಾಣಿಯಿಂದ ಹಲ್ಲೆ ನಡೆಸಿ ಸ್ಥಳದಲ್ಲೇ ಕೊಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ನಂತರ ಗ್ರೈಂಡರ್ ಬಳಸಿ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ, ಒಂದು ಭಾಗವನ್ನು ಚರಂಡಿಗೆ ಎಸೆದು ಉಳಿದ ಭಾಗಗಳನ್ನು ರಾಜ್‌ಘಾಟ್‌ಗೆ ಕೊಂಡೊಯ್ದು ಗಂಗಾ ನದಿಗೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಕತ್ತರಿಸಲು ಬಳಸಲಾಗಿದೆ ಎನ್ನಲಾದ ಗ್ರೈಂಡರ್, ಹಲ್ಲೆಗೆ ಬಳಸಿದ ಕಬ್ಬಿಣದ ಸುತ್ತಿಗೆ ಸೇರಿದಂತೆ ಹಲವು ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೃತರ ಡಿಎನ್‌ಎ ಮಾದರಿಗಳನ್ನು ಮಕ್ಕಳ ಡಿಎನ್‌ಎ ಜೊತೆ ಹೋಲಿಸಿ ಗುರುತನ್ನು ಖಚಿತಪಡಿಸಲಾಗುತ್ತದೆ. ಪ್ರಕರಣವನ್ನು ಬಲಪಡಿಸಲು ಹೆಚ್ಚಿನ ತನಿಖೆ ಮುಂದುವರಿದಿದ್ದು, ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯನ್ನು ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ತುಂಡು ತುಂಡು ಮಾಡಿ ವುಡ್‌ ಗ್ರೈಂಡರ್‌ನಲ್ಲಿ ರುಬ್ಬಿ ಚರಂಡಿಗೆ ಎಸೆದ ಆರೋಪದ ಹಿನ್ನೆಲೆಯಲ್ಲಿ, ಆತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ರೂಬಿ ಮತ್ತು ಗೌರವ್ ಎಂಬ ಆರೋಪಿಗಳನ್ನು ಡಿಸೆಂಬರ್ 20ರಂದು ವಶಕ್ಕೆ ಪಡೆದು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಕೆ. ಬಿಷ್ಣೋಯ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಚಂದೌಸಿ ಪ್ರದೇಶದ ಮೊಹಲ್ಲಾ ಚುನ್ನಿ ನಿವಾಸಿ ರೂಬಿ ನವೆಂಬರ್ 18ರಂದು ತನ್ನ ಪತಿ ರಾಹುಲ್ (38) ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ ಡಿಸೆಂಬರ್ 15ರಂದು ಈದ್ಗಾ ಪ್ರದೇಶದ ಸಮೀಪದ ಚರಂಡಿಯಿಂದ ತೀವ್ರವಾಗಿ ವಿರೂಪಗೊಂಡ ಶವವನ್ನು ಪೊಲೀಸರು ಪತ್ತೆಹಚ್ಚಿದ್ದರು.

ಪತ್ತೆಯಾದ ಶವದಲ್ಲಿ ತಲೆ, ಕೈಗಳು ಮತ್ತು ಕಾಲುಗಳು ಕಾಣೆಯಾಗಿದ್ದವು. ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವಿಧಿವಿಜ್ಞಾನ ತಂಡವು ವಿವರವಾದ ಪರಿಶೀಲನೆ ಮಾಡಿ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ತನಿಖೆಯ ವೇಳೆ ಮೃತದೇಹದ ಮೇಲೆ “ರಾಹುಲ್” ಎಂಬ ಹೆಸರು ಬರೆಯಲ್ಪಟ್ಟಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಸಮೀಪದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಾಣೆಯಾದವರ ವರದಿಗಳನ್ನು ಪರಿಶೀಲಿಸಿದಾಗ, ರಾಹುಲ್ ಅವರ ಮೊಬೈಲ್ ಫೋನ್ ನವೆಂಬರ್ 18ರಿಂದಲೇ ಸ್ವಿಚ್ ಆಫ್ ಆಗಿರುವುದು ತಾಂತ್ರಿಕ ವಿಶ್ಲೇಷಣೆಯಲ್ಲಿ ದೃಢಪಟ್ಟಿದೆ.

ಈ ಎಲ್ಲ ಅಂಶಗಳ ಆಧಾರದ ಮೇಲೆ ಪೊಲೀಸರು ರೂಬಿಯ ಪಾತ್ರವನ್ನು ಶಂಕಿಸಿದರು. ವಿಚಾರಣೆಯ ವೇಳೆ, ರೂಬಿ ಹಾಗೂ ಗೌರವ್ ನಡುವೆ ಅಕ್ರಮ ಸಂಬಂಧವಿದ್ದು, ಅದನ್ನು ರಾಹುಲ್ ರೆಡ್‌ಹ್ಯಾಂಡ್ ಆಗಿ ಕಂಡಿದ್ದಾನೆ. ಈ ಹಿನ್ನೆಲೆಯಲ್ಲೇ ರೂಬಿ ತನ್ನ ಪ್ರಿಯಕರ ಗೌರವ್‌ನ ಸಹಾಯದಿಂದ ರಾಹುಲ್‌ನನ್ನು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ರಾಹುಲ್ ಮೇಲೆ ಕಬ್ಬಿಣದ ರಾಡ್ ಮತ್ತು ಕಬ್ಬಿಣದ ಕುಟ್ಟಾಣಿಯಿಂದ ಹಲ್ಲೆ ನಡೆಸಿ ಸ್ಥಳದಲ್ಲೇ ಕೊಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ನಂತರ ಗ್ರೈಂಡರ್ ಬಳಸಿ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ, ಒಂದು ಭಾಗವನ್ನು ಚರಂಡಿಗೆ ಎಸೆದು ಉಳಿದ ಭಾಗಗಳನ್ನು ರಾಜ್‌ಘಾಟ್‌ಗೆ ಕೊಂಡೊಯ್ದು ಗಂಗಾ ನದಿಗೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಕತ್ತರಿಸಲು ಬಳಸಲಾಗಿದೆ ಎನ್ನಲಾದ ಗ್ರೈಂಡರ್, ಹಲ್ಲೆಗೆ ಬಳಸಿದ ಕಬ್ಬಿಣದ ಸುತ್ತಿಗೆ ಸೇರಿದಂತೆ ಹಲವು ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೃತರ ಡಿಎನ್‌ಎ ಮಾದರಿಗಳನ್ನು ಮಕ್ಕಳ ಡಿಎನ್‌ಎ ಜೊತೆ ಹೋಲಿಸಿ ಗುರುತನ್ನು ಖಚಿತಪಡಿಸಲಾಗುತ್ತದೆ. ಪ್ರಕರಣವನ್ನು ಬಲಪಡಿಸಲು ಹೆಚ್ಚಿನ ತನಿಖೆ ಮುಂದುವರಿದಿದ್ದು, ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment