ಸಂಗೀತ ಸಂಯೋಜಕ ಮತ್ತು ಗಾಯಕ ಪಲಾಶ್ ಮುಚ್ಛಲ್ ಅವರು ನಟ, ನಿರ್ಮಾಪಕ ವಿದ್ಯಾನ್ ಮಾನೆ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಪಲಾಶ್ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, “ನನ್ನ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಸುಳ್ಳು, ಅತಿರೇಕ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿರುವ ಸಾಂಗ್ಲಿ ಮೂಲದ ವಿದ್ಯಾನ್ ಮಾನೆ ಅವರಿಗೆ ನನ್ನ ವಕೀಲ ಶ್ರೇಯನ್ಶ್ ಮಿಥಾರೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಸಂಬಂಧ ಲೀಗಲ್ ನೋಟಿಸ್ ಕಳುಹಿಸಿದ್ದಾರೆ” ಎಂದು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ, ವಿದ್ಯಾನ್ ಮಾನೆ ಸಾಂಗ್ಲಿ ಪೊಲೀಸ್ ಇಲಾಖೆಗೆ ಭೇಟಿ ನೀಡಿ ಪಲಾಶ್ ಅವರಿಂದ 40 ಲಕ್ಷ ರೂ. ವಂಚನೆಗೆ ಒಳಗಾಗಿರುವುದಾಗಿ ದೂರು ದಾಖಲಿಸಿದ್ದರು. ಪಲಾಶ್ ವಿರುದ್ಧ FIR ದಾಖಲಿಸುವಂತೆ ಕೋರಿ ಅವರು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಮಂಗಳವಾರ (ಜನವರಿ 20) ಭೇಟಿಯಾಗಿದ್ದರು.
ಪಲಾಶ್ ತಿಳಿಸಿದ್ದಾರೆ, “2023ರ ಡಿಸೆಂಬರ್ 5ರಂದು ಮಾನೆ ನನ್ನನ್ನು ಭೇಟಿಯಾಗಿ ‘ನಝಾರಿಯಾ’ ಸಿನಿಮಾಗೆ ಬಂಡವಾಳ ಹಾಕಲು ಕೇಳಿದರು. ಪಾತ್ರವೂ ನೀಡುವಂತೆ ಹೇಳಿದರು. ಆದಕಾರಣ ನಾನು 40 ಲಕ್ಷ ರೂ. ಹೂಡಿಕೆ ಮಾಡಿದೆ. ಆದರೆ ಸಿನಿಮಾ ಪೂರ್ಣಗೊಳ್ಳಲಿಲ್ಲ. ಹಣ ವಾಪಸ್ ಪಡೆಯಲು ಕೇಳಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಹೇಳಿದ್ದಾರೆ.
ಇದೇ ವೇಳೆ, ಸ್ಮೃತಿ ಮಂಧಾನ ಅವರ ವಿವಾಹವು ನವೆಂಬರ್ 23, 2025 ರಂದು ಸಾಂಗ್ಲಿಯಲ್ಲಿ ನಿಗದಿಯಾಗಿತ್ತು. ಆದರೆ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದ ಸಮಾರಂಭವನ್ನು ಮುಂದೂಡಲಾಯಿತು. ಪಲಾಶ್ ಸಹ ಅನಾರೋಗ್ಯಕ್ಕೆ ಒಳಗಾದ ಕಾರಣ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ನಂತರ, ಮಂಧಾನರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದರು.






