---Advertisement---

ಮೈಸೂರು : ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪಕ್ಕೆ ಹೆದರಿ ನಾಲೆಗೆ ಹಾರಿ ಯುವಕ ಆತ್ಮಹತ್ಯೆ!!

On: November 3, 2025 12:58 PM
Follow Us:
ಮೈಸೂರು : ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪಕ್ಕೆ ಹೆದರಿ ನಾಲೆಗೆ ಹಾರಿ ಯುವಕ ಆತ್ಮಹತ್ಯೆ!!
---Advertisement---

ಶಾಲಾ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಆರೋಪದಿಂದ ಹೆದರಿ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಯುವಕ ವಾಯ್ಸ್ ನೋಟ್ ಮಾಡಿದ್ದಾನೆ.

ವಿದ್ಯಾರ್ಥಿನಿ ಗರ್ಭಿಣಿ ಆಗಿರುವುದಕ್ಕೆ ನಾನು ಕಾರಣನಲ್ಲ, ನನಗೂ ಆಕೆಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾನೆ.

ವೈದ್ಯರು ಬಂದು ಬಾಲಕಿಯ ಆರೋಗ್ಯ ತಪಾಸಣೆ ಮಾಡಿದ್ದರು. ಆಗ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಶಾಲೆಗೆ ಕಳಂಕ ಬರುತ್ತದೆ ಎಂದು ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಹುಡುಗಿ ಮಾತನಾಡಿಸಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಶಾಲೆಯ ಪಿ.ಟಿ. ಟೀಚರ್ ಇದಕ್ಕೆಲ್ಲ ಕಾರಣ. ಅವರು ಹೀಗೆ ಮಾಡಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವಾಯ್ಸ್ ನೋಟ್ ನಲ್ಲಿ ತಿಳಿಸಿದ್ದಾನೆ.

ಅಕ್ಟೋಬರ್ 31 ರಂದು ವಾಯ್ಸ್ ನೋಟ್ ಹಾಕಿ ಯುವಕ ನಾಪತ್ತೆಯಾಗಿದ್ದ. ಇದೀಗ ಬೆಟ್ಟದ ತುಂಗಾ ನಾಲೆಯಲ್ಲಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಟ್ಟದ ತುಂಗಾ ಗ್ರಾಮದ ನಾಲೆಯ ಬಳಿ ಬೈಕ್, ಚಪ್ಪಲಿ, ಮೊಬೈಲ್, ಜರ್ಕಿನ್ ಬಿಟ್ಟು ನಾಲೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡಿಎನ್‌ಎ ಟೆಸ್ಟ್ ಮೂಲಕ ತಪ್ಪಿರಸ್ಥರ ಪತ್ತೆ ಹಚ್ಚಲು ಒತ್ತಾಯಿಸಿದ್ದಾನೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment