---Advertisement---

ಭಗವಂತ ಖೂಬಾ (bhagwanth khuba) ಸೋತರೆ ಅದ್ದೂರಿ ಮದುವೆ :ಪ್ರಭು ಚವಾಣ 

By guruchalva

Published on:

Follow Us
ಭಗವಂತ ಖೂಬಾ (bhagwanth khuba) ಸೋತರೆ ಅದ್ದೂರಿ ಮದುವೆ :ಪ್ರಭು ಚವಾಣ 
---Advertisement---

ಭಗವಂತ ಖೂಬಾ(bhagwanth khuba) ಸೋತರೆ ಅದ್ದೂರಿ ಮದುವೆ’ ಮಾಡುತ್ತೀನಿ ಎಂದು ವಿವಾಹದ ಬಗೆಗೆ ಈ ರೀತಿ ಆಶ್ವಾಸನೆ ನೀಡಿದ್ದ ಶಾಸಕ ಪ್ರಭು ಚವಾಣ ಎಂದು ನೀಡಿದ್ದವರು ಸ್ವತಃ ಶಾಸಕ ಪ್ರಭು ಚವಾಣ್. ಹೌದು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಹಾರಾಷ್ಟ್ರದ ಯುವತಿ ಆರೋಪ ಮಾಡಿದ್ದಾರೆ ಭಗವಂತ ಖೂಬಾ ಅವರು ಯಾರೆಂಬುದು ನನಗೆ ಗೊತ್ತಿಲ್ಲ.

ಭಗವಂತ ಖೂಬಾ (bhagwanth khuba)ಅವರ ಚುನಾವಣೆ ನಂತರ ಮದುವೆ ಮಾಡೋಣ.

ಖೂಬಾ ಅವರು ಚುನಾವಣೆಯಲ್ಲಿ ಸೋತರೆ ಅದ್ದೂರಿ ಮದುವೆ ಮಾಡೋಣ ಎಂದು ಶಾಸಕ ಪ್ರಭು ಚವಾಣ್‌ ಅವರು ಹೇಳಿರುವುದು ನೆನಪಿದೆ. ಖೂಬಾ ಅವರ ಹೆಸರು ಮೊದಲ ಸಲ ಕೇಳಿರುವುದೇ ಚವಾಣ್ ಅವರ ಬಾಯಿಂದ’ ಖೂಬಾ ಅವರ ಚುನಾವಣೆ ನಂತರ ಮದುವೆ
ಮಾಡೋಣ. ಅದಕ್ಕೆ ನರೇಂದ್ರ ಮೋದಿ, ಅಮಿತ್ ಷಾ ಅವರನ್ನು ಕರೆಸೋಣ ಅಂತ ಹೇಳಿದರು. ಚುನಾವಣೆ ನಂತರ ಕೇಳಿದರೆ, ಮಳೆಗಾಲ ಮುಗಿಯಲಿ ಎಂದರು.ಇದಾದ ಬಳಿಕ ಅವರು ಅಸ್ವಸ್ಥರಾದರು. ಹುಷಾರಾದ ನಂತರ ಮಾಡೋಣ ಅಂದರು. ಹೀಗೆ ಒಂದಿಲ್ಲೊಂದು ನೆಪ ಹೇಳಿ ಪ್ರಭು ಚವಾಣ್‌ ಅವರು ಮಗ ಪ್ರತೀಕ್ ಜೊತೆಗೆ ನಿಶ್ಚಯವಾಗಿದ್ದ ವಿವಾಹವನ್ನು ಮುಂದೂಡುತ್ತಲೇ ಹೋದರು’ ಎಂದು ವಿವರಿಸಿದರು.

ಖೂಬಾ ಅವರು ಯಾರೆಂಬುದೇ ನನಗೆ ಗೊತ್ತಿಲ್ಲ. ಹೀಗಿರುವಾಗ ಅವರು ನಮ್ಮನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಪ್ರಭು ಚವಾಣ್‌ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಅದು ಸತ್ಯಕ್ಕೆ ದೂರವಾದದ್ದು. ಮದುವೆಗೆ ವಿಳಂಬ ಆಗುತ್ತಿರುವುದರಿಂದ ಅದರ ಕುರಿತಾಗಿ ಮಾತನಾಡಲು ನನ್ನ ಪೋಷಕರು ಔರಾದ್ ತಾಲ್ಲೂಕಿನ ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿರುವ ಪ್ರಭು ಚವಾಣ್‌ ಅವರ ಮನೆಗೆ ಹೋಗಿದ್ದರು ಆದರೆ, ನನ್ನ ತಾಯಿಗೆ ಹೊಡೆದು ಮನೆಯಿಂದ ಹೊರ ಹಾಕಿದರು. ತಾಂಡಾ ಜನ ನಮ್ಮ ಮೇಲೆ ಕಲ್ಲು ಹೊಡೆದರು. ಪೊಲೀಸರು ಎರಡು ಗಂಟೆ ಹೊಕ್ತಾಣಾ ಠಾಣೆಯಲ್ಲಿ ಕೂರಿಸಿಕೊಂಡು, ಅವರು ದೊಡ್ಡ ವ್ಯಕ್ತಿಗಳು ಎಂದು ನಮ್ಮವರನ್ನೇ ಹೆದರಿಸಿದರು. ಅಲ್ಲಿನ ಸಿಪಿಐ ಮತ್ತು ಪಿಎಸ್‌ಐ ನಮಗೆ ಸೇರಿದ ಲಾಕೆಟ್ ಮತ್ತು ಮೊಬೈಲ್ ವಾಪಸ್ ಕೊಡಿಸುತ್ತೇವೆ ಎಂದು ಹೇಳಿ ನಮ್ಮನ್ನು ಅಲ್ಲಿಂದ ಕಳಿಸಿದ್ದರು. ಆದರೆ, ಅನಂತರ ಅವರು ಹಾಗೆ ಮಾಡಲಿಲ್ಲ’ ಎಂದು ಯುವತಿ ಘಟನೆ ಕುರಿತು ಪ್ರಭು ಚವಾಣ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಉದ್ದೇಶದಿಂದ ಪ್ರಭು ಚವಾಣ ವಿಷಯಾಂತರ ಅವರು ಭಗವಂತ ಖೂಬಾ ಅವರ ಹೆಸರು ಹೇಳುತ್ತಿದ್ದಾರೆ. ಆದರೆ, ನಮಗೆ ಯಾರೂ ಪ್ರಚೋದನೆ ಮಾಡುತ್ತಿಲ್ಲ ಎಂದು ಯುವತಿ ಘಟನೆ ಕುರಿತು ಮಾಹಿತಿ ನೀಡಿದರು.

---Advertisement---

2 thoughts on “ಭಗವಂತ ಖೂಬಾ (bhagwanth khuba) ಸೋತರೆ ಅದ್ದೂರಿ ಮದುವೆ :ಪ್ರಭು ಚವಾಣ ”

Leave a Comment