---Advertisement---

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ಎಫ್‌ಐಆರ್..!

On: September 11, 2025 11:17 AM
Follow Us:
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ಎಫ್‌ಐಆರ್..!
---Advertisement---

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, “ಕಲಾ ಸಮ್ರಾಟ” ಎಂದು ಪ್ರಸಿದ್ಧರಾದ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರು ಪ್ರಕಾರ, ನಾರಾಯಣ್ ಅವರ ಸೊಸೆ ಕುಟುಂಬದವರ ಮೇಲೆ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಪ್ರಕರಣದಲ್ಲಿ ನಾರಾಯಣ್ ಎ-2 (ಎರಡನೇ ಆರೋಪಿ) ಆಗಿ ಹೆಸರು ಕಂಡುಬಂದಿದ್ದಾರೆ.

ಆರೋಪಕ್ಕೆ ಪ್ರತಿಕ್ರಿಯಿಸಿದ ಎಸ್. ನಾರಾಯಣ್ ಬೇಸರ ವ್ಯಕ್ತಪಡಿಸಿದ್ದಾರೆ.

“ಒಂದು ವರ್ಷದ ಹಿಂದೆಯೇ ಸೊಸೆ ಮನೆ ಬಿಟ್ಟು ಹೋಗಿದ್ದಾರೆ. ಈಗ ವರದಕ್ಷಿಣೆ ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ನಮ್ಮ ದೇಶದಲ್ಲಿ ಹೆಣ್ಮಕ್ಕಳಿಗೆ ಇರುವ ಏಕೈಕ ಅಸ್ತ್ರ ಇದೇ — ಅದನ್ನು ಬಳಸುತ್ತಿದ್ದಾರೆ,” ಎಂದು ನಾರಾಯಣ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಪ್ರಕರಣ ಈಗ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ:

“ಪ್ರಕರಣ ಕೋರ್ಟ್‌ನಲ್ಲಿ ಇದೆ. ನಾವು ಹೆಚ್ಚು ಮಾತನಾಡಿದ್ರೆ, ಅವರಿಗೇ ಅವಮಾನ ಮಾಡಿದಂತೆ ಆಗುತ್ತೆ. ಪಾಪ ಹೆಣ್ಮಗು, ಅವಳಿಗೆ ತೇಜೋವಧೆ ಮಾಡಬಾರದು,” ಎಂದಿದ್ದಾರೆ.

ಮದುವೆ ಬಗ್ಗೆ ಮಾತನಾಡಿದ ನಾರಾಯಣ್, ತಮ್ಮ ಮಗ-ಸೊಸೆ ಪ್ರೀತಿಸಿ ಮದುವೆಯಾಗಿದ್ದಾರೆ ಎಂದು ಹೇಳಿದ್ದಾರೆ.

“ನಾವು ವಿರೋಧ ಮಾಡಿಲ್ಲ. ಅವರಿಬ್ಬರನ್ನೂ ಮದುವೆ ಮಾಡಿ ಕೊಟ್ಟಿದ್ದೇವೆ. ಆದರೆ ಸೊಸೆಯಾಗಿ ಒಂದು ಕುಟುಂಬಕ್ಕೆ ಬಂದಮೇಲೆ ಆ ಮನೆಯ ಸಂಸ್ಕೃತಿ ಅರ್ಥ ಮಾಡಿಕೊಂಡು ಬಾಳುವುದನ್ನು ಕಲಿಯಬೇಕು. ಇವತ್ತಿನ ಪೀಳಿಗೆ ಹಿರಿಯರ ಮಾತು ಕೇಳುವುದಕ್ಕೆ ಸಿದ್ಧವಿಲ್ಲ — ಇದೇ ದೊಡ್ಡ ದುರಂತ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದಿಂದಾಗಿ ಚಿತ್ರರಂಗದಲ್ಲಿ ಚರ್ಚೆಗಳು ಜೋರಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಲಯದ ನಿರ್ಧಾರವನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

Join WhatsApp

Join Now

RELATED POSTS

1 thought on “ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ಎಫ್‌ಐಆರ್..!”

Leave a Comment