---Advertisement---

ಮೊದಲ್ ಸಲ ಬ್ಯಾಂಕಿಂದ ಸಾಲ ತೊಗೋಬೇಕು ಅಂದುಕೊಂಡವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ Good news for first-time bank loan seekers

On: August 25, 2025 3:04 PM
Follow Us:
Good news for first-time bank loan seekers
---Advertisement---

CIBIL ಸ್ಕೋರ್ ನಿಮ್ಮ ಕ್ರೆಡಿಟ್ ಇತಿಹಾಸ, ರೇಟಿಂಗ್ ಮತ್ತು ವರದಿಯ 3 ಅಂಕಿಯ ಸಂಖ್ಯಾತ್ಮಕ ಸಾರಾಂಶವಾಗಿದ್ದು, 300 ರಿಂದ 900 ರವರೆಗೆ ಇರುತ್ತದೆ. ಕನಿಷ್ಠ ಸಿಬಿಲ್‌ ಸ್ಕೋರ್‌ ಇಲ್ಲ ಎಂಬ ಕಾರಣಕ್ಕೆ ಮೊದಲ ಬಾರಿಗೆ ಅರ್ಜಿ ಹಾಕಿದವರಿಗೆ ಬ್ಯಾಂಕ್‌ಗಳು ಸಾಲ ನಿರಾಕರಿಸುವಂತಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

 ”ಹೊಸ ಸಾಲಗಾರರ ಅರ್ಜಿಗಳನ್ನು ಹಿಂದಿನ ಸಾಲ ಇತಿಹಾಸವಿಲ್ಲ ಎಂಬ ಕಾರಣಕ್ಕೆ ತಿರಸ್ಕರಿಸುವಂತಿಲ್ಲ” ಎಂದು ಲೋಕಸಭೆಯಲ್ಲಿ ಈ ಬಗ್ಗೆ ಉತ್ತರ ನೀಡಿರುವ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್‌ ಚೌಧರಿ,  ಮಾಹಿತಿ ನೀಡಿದರು. ಭಾರತೀಯ ರಿಸವ್‌ರ್‍ ಬ್ಯಾಂಕ್‌ ಈಗಾಗಲೇ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ.

”ಮೊದಲ ಬಾರಿ ಸಾಲ ಪಡೆಯುವವರಿಗೆ ಸಿಬಿಲ್‌ ಸ್ಕೋರ್‌ ಇಂತಿಷ್ಟೇ ಇರಬೇಕು ಎಂದು ಆರ್‌ಬಿಐ ನಿಗದಿಗೊಳಿಸಿಲ್ಲ. ಸಾಲ ನೀಡುವ ಹಣಕಾಸು ಸಂಸ್ಥೆಗಳು ಅನುಮೋದಿತ ನೀತಿಗಳು ಮತ್ತು ಮಾರ್ಗಸೂಚಿಗಳ ಆಧಾರದ ಮೇಲೆ ತಮ್ಮ ನಿರ್ಧಾರ ತೆಗೆದುಕೊಳ್ಳುತ್ತವೆ. ಕ್ರೆಡಿಟ್‌ ಮಾಹಿತಿ ವರದಿಯು ಹಲವಾರು ಅಂಶಗಳಲ್ಲಿಒಂದು ಅಂಶ ಮಾತ್ರ,” ಎಂದು ಚೌಧರಿ ವಿವರಿಸಿದರು.

ಭಾರತೀಯ ರಿಸರ್ವ್ ಬ್ಯಾಂಕ್ ಚಿನ್ನದ ಸಾಲದ ನಿಯಮಗಳಲ್ಲಿ ಬದಲಾವಣೆಗಳನ್ನು ಘೋಷಿಸಿದ್ದು, ಇದರ ಕುರುತು ಹೊಸ ನಿಯಮಗಳು 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ. ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ಚಿನ್ನದ ಮೌಲ್ಯದ ಶೇ. 85ರಷ್ಟು ಸಾಲ ನೀಡಲು ಅನುಮತಿಸಲಾಗಿದೆ. ಸಾಲದ ಮಿತಿ ₹2.5 ಲಕ್ಷಕ್ಕಿಂತ ಕಡಿಮೆ ಇದ್ದರೆ, ಕ್ರೆಡಿಟ್ ಸ್ಕೋರ್ ಪರಿಶೀಲಿಸುವ ಅಗತ್ಯವಿಲ್ಲ. ಸಾಲ ತೀರಿಸಿದ ದಿನವೇ ಆಭರಣಗಳನ್ನು ಹಿಂತಿರುಗಿಸಬೇಕು. ವಿಳಂಬವಾದರೆ ದಿನಕ್ಕೆ ₹5,000 ದಂಡ ವಿಧಿಸಲಾಗುವುದು.

ಇನ್ನು 7 ಕೋಟಿ ರೂ. ಸಾಲ ತೀರಿಸದ ಗ್ರಾಹಕರಿಗೆ ನೋಟಿಸ್‌ ರದ್ದುಗೊಳಿಸಿದ ಹೈಕೋರ್ಟ್‌. ಮೈಸೂರಿನ ಕುವೆಂಪುನಗರ ಕೆನರಾ ಬ್ಯಾಂಕ್ ಶಾಖೆಯಿಂದ ಏಳು ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡದ ಗ್ರಾಹಕರಿಗೆ ನೀಡಿದ್ದ ಶೋಕಾಸ್ ನೋಟಿಸ್ ನೀಡಲಗಿತ್ತು. ಇದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಉದ್ದೇಶಪೂರ್ವಕ ಸುಸ್ತಿದಾರ ಎಂದು ಘೋಷಿಸಿದ ಬ್ಯಾಂಕ್ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಸಂಬಂಧಿತ ಕಾನೂನು ಪ್ರಕ್ರಿಯೆಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲು ಬ್ಯಾಂಕ್‌ಗೆ ನ್ಯಾಯಾಲಯ ಅನುಮತಿ ನೀಡಿದೆ.

ನೀವು ಚಿನ್ನ ಅಥವಾ ಬೆಳ್ಳಿಯ ಮೇಲೆ ಸಾಲ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಹಿಂದೆ ಇದ್ದ ನಿಯಮಗಳಿಂದಾಗಿ ಅಗತ್ಯವಿರುವಷ್ಟು ಸಾಲ ಸಿಗುತ್ತಿರಲಿಲ್ಲ. ಈ ಸಮಸ್ಯೆಗೆ ಪರಿಹಾರವಾಗಿ, ಆರ್‌ಬಿಐ ಚಿನ್ನ ಮತ್ತು ಬೆಳ್ಳಿ ಸಾಲಕ್ಕೆ ಸಂಬಂಧಿಸಿದಂತೆ ಕೆಲವು ಹೊಸ ಮತ್ತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment