---Advertisement---

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಎನ್ನುವಂತೆ ತಂದೆ ಮಾಡಿದ ಸಾಲದ ತಪ್ಪಿಗೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ..!

On: November 20, 2025 11:49 AM
Follow Us:
---Advertisement---

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾನವೀಯತೆಗೆ ನಿಲ್ಲುವಂತಹ ಹೇಯ ಕೃತ್ಯ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ, ತಂದೆ ತೆಗೆದುಕೊಂಡ ಸಾಲ ಮರುಪಾವತಿಸದಿದ್ದ ಕಾರಣಕ್ಕೆ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಬಾಲಕಿಯ ತಾಯಿ ನೀಡಿದ ದೂರು ಆಧಾರದಲ್ಲಿ, ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡಿದ್ದು, ಮತೀನ್ ಎನ್ನಲಾದ ಆರೋಪಿ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಮಾಹಿತಿ ಪ್ರಕಾರ, ಬಾಲಕಿಯ ತಂದೆ ಸಂಘದಿಂದ ಪಡೆದಿದ್ದ ಸಾಲವನ್ನು ತಪ್ಪಿಸುತ್ತಿದ್ದುದರಿಂದ ಆರೋಪಿಯು ನಿನ್ನೆ ಸಂಜೆ ಅವರ ಮನೆಗೆ ಹಣ ಬೇಡಲು ಹೋಗಿದ್ದ. ಆ ಸಮಯದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಆಟವಾಡುತ್ತಿದ್ದಳು. ಮನೆದಲ್ಲಿ ಯಾರೂ ಇಲ್ಲವೆಂದ ಮಾಹಿತಿಯನ್ನು ತಿಳಿದ ಆರೋಪಿ, ಬಲವಂತವಾಗಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂಬುದು ದೂರುನ ವಿವರ.

ಘಟನೆ ಬಳಿಕ ತಾಯಿಗೆ ವಿಷಯ ತಿಳಿದು, ತಕ್ಷಣವೇ ಶಿರಸಿ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಪರಾರಿ ಆಗಿರುವ ಆರೋಪಿ ಮತೀನ್‌ಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

Join WhatsApp

Join Now

RELATED POSTS