---Advertisement---

ರೇಣುಕಸ್ವಾಮಿ ಕೇಸ್‌ನಲ್ಲಿ ಮತ್ತೆ ‘ಪವಿತ್ರಾ ಗೌಡ ಅರೆಸ್ಟ್.! In the Renukaswamy case, Pavithra Gowda arrested again.

On: August 14, 2025 8:42 AM
Follow Us:
Renukaswamy case, Pavithra Gowda arrested again
---Advertisement---

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪ ಸಂಖ್ಯೆ 1 ಪವಿತ್ರಾ ಗೌಡರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ವರದಿಗಳ ಪ್ರಕಾರ, ಮಹಿಳಾ ಪೊಲೀಸರು ಸ್ಥಳಕ್ಕೆ ಆಗಮಿಸಿ, ನೋಟಿಸ್ ನೀಡಿದ ಬಳಿಕ ಬಂಧನ ಪ್ರಕ್ರಿಯೆ ನಡೆಸಿದ್ದಾರೆ.

ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬೆನ್ನಿಗೇ ಈ ಬಂಧನ ನಡೆದಿದೆ. ಬಂಧನದ ಮೊದಲು ಪವಿತ್ರಾ ಗೌಡ ಆತ್ಮೀಯರ ಸಮ್ಮುಖದಲ್ಲಿ ಕಣ್ಣೀರಿಟ್ಟಿದ್ದಾಳೆಂದು ತಿಳಿದುಬಂದಿದೆ. ಪೊಲೀಸರು ಆಕೆಗೆ ಆದೇಶದ ಪ್ರತಿಯನ್ನು ನೀಡಿದ ನಂತರ ಮಹಿಳಾ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಪ್ರಸ್ತುತ ಪವಿತ್ರಾ ಗೌಡರನ್ನು ಪೊಲೀಸರ ವಶದಲ್ಲಿರಿಸಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಬಳಿಕ ಆಕೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಥವಾ ಬೇರೆ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ.

ಈ ಪ್ರಕರಣದಲ್ಲಿ ಈಗಾಗಲೇ ಭಾರೀ ಜನರ ಗಮನ ಸೆಳೆದಿರುವ ಕನ್ನಡ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಲಕ್ಷ್ಮಣ್, ನಾಗರಾಜ್, ಪ್ರದೋಷ್, ಅನು ಕುಮಾರ್, ಜಗದೀಶ್ ಅವರ ಜಾಮೀನುಗಳನ್ನು ಸಹ ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರ ಪೀಠವು, ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸಿದ್ದು, ಆ ನಿರ್ಣಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment